ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯ:

ಬೇಲೂರು, ಏ.19- ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಟ್ರೈಲರ್ ಪಲ್ಟಿಯಾಗಿ ಸುಮಾರು 10 ಜನರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಅರೇಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಲಕ್ಕುಂದ ಗ್ರಾಮದಲ್ಲಿ ನಡೆದಿದೆ.
ತಮಿಳುನಾಡಿನ ತಿರುವಣ್ಣಾಮಲೈ ಮೂಲದ ಕೂಲಿ ಕಾರ್ಮಿಕರನ್ನು ಬೆಳಗ್ಗೆ 8 ಗಂಟೆ ಸಮಯದಲ್ಲಿ ತಾಲ್ಲೂಕಿನ ಬಿಕ್ಕೋಡು ಹೋಬಳಿ ಲಕ್ಕುಂದ ಗ್ರಾಮದ ಬಳಿಯ ತೋಟವೊಂದಕ್ಕೆ ಕೆಲಸಕ್ಕೆಂದು ಜೀಪ್‍ನ ಹಿಂಬಾಗದ ಟ್ರೈಲರ್‍ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಟ್ರೈಲರ್ ಪಲ್ಟಿಯಾಗಿ ಈ ಘಟನೆ ಸಂಬವಿಸಿದೆ.  ಈ ಘಟನೆಯಲ್ಲಿ ತಿರುವಣ್ಣಾಮಲೈ ಮೂಲದ 25 ವರ್ಷದ ಮಹೇಂದ್ರ ಹಾಗೂ 18 ವರ್ಷದ ಸೇಟ್ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.  ಬೇಲೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಅರೇಹಳ್ಳಿ ಪೆÇಲೀಸರು ಮಹಜರು ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ