ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ:

ಮೈಸೂರು,ಏ.19- ಬಾದಮಿ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಅಭ್ಯರ್ಥಿ ಆಯ್ಕೆಯಾಗಿದ್ದರೂ ಸಹ ಬಿ ಫಾರಂ ನೀಡಿಲ್ಲ ಹಾಗಾಗಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ನಡೆಸಿದ ಮಾತುಕತೆ ಫಲ ನೀಡಿಲ್ಲ.  ತಡರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಕೆ.ಸಿ.ವೇಣುಗೋಪಾಲ್, ಜಿ.ಪರಮೇಶ್ವರ್ ಅವರೊಂದಿಗೆ ನಡೆದ ಮಾತುಕತೆ ಅಪೂರ್ಣಗೊಂಡಿದೆ. ಸಿದ್ದರಾಮಯ್ಯ ಅರ್ಧಕ್ಕೆ ಸಭೆಯಿಂದ ಹೊರಬಂದರೆಂದು ತಿಳಿದುಬಂದಿದೆ.  ಬಾದಾಮಿ ಕ್ಷೇತ್ರಕ್ಕೆ ಟಿಕೆಟ್ ನೀಡಿದ್ದರೂ ಬಿ ಫಾರಂ ನೀಡಿದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತೆಂದೂ ಆದರೆ ಅಸಮಾಧಾನದಿಂದ ಎದ್ದು ಹೊರ ನಡೆದರೆಂದು ನಂಬಲರ್ಹ ಮೂಲಗಳು ತಿಳಿಸಿವೆ.  ಈ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದ ಬಗ್ಗೆ ಚರ್ಚಿಸಿಲ್ಲ. ಅಲ್ಲಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದು ದೃಢವಾಗಿಲ್ಲ. ಚುನಾವಣೆಯ ಪ್ರಚಾರ ಸಂಬಂಧ ನಿನ್ನೆ ರಾತ್ರಿ ವೇಣುಗೋಪಾಲ್ ಹಾಗೂ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿ ಪ್ರಚಾರಕ್ಕೆ ತೆರೆ ಎಳೆದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ