ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧನ :

ಪಣಜಿ, ಏ.19-ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ಪಣಜಿ ಪೆÇಲೀಸರು ಬಂಧಿಸಿದ್ದಾರೆ.
ಪ್ರಸ್ತುತ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ್ದ.
ಈತ ಫೇಸ್‍ಬುಕ್‍ನಲ್ಲಿ ಜಸ್ಟ್ ಗಾಟ್ ನ್ಯೂಸ್ ದಟ್ ಪರಿಕ್ಕರ್ ಈಸ್ ನೋ ಮೋರ್(ಈಗಷ್ಟೇ ಸುದ್ದಿ ತಿಳಿಯಿತು. ಪರಿಕ್ಕರ್ ಇನ್ನಿಲ್ಲ) ಎಂದು ಪೆÇೀಸ್ಟ್ ಮಾಡಿದ್ದ.
ಹಲವು ದಿನಗಳಿಂದ ಮೆದೊಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಟಿಕ್) ಕ್ಯಾನ್ಸರ್‍ನಿಂದ ಬಳಲುತ್ತಿರುವ ಗೋವಾ ಸಿಎಂ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾದಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ