ಆರ್‍ಟಿಇ ಅಡಿ ಶಾಲಾ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭ

ಬೆಂಗಳೂರು, ಏ.20-ಆರ್‍ಟಿಇ ಅಡಿ ಶಾಲಾ ಮಕ್ಕಳ ದಾಖಲಾತಿ ಪ್ರಕ್ರಿಯೆ ಇಂದು ಆರಂಭಗೊಳ್ಳಲಿದೆ.
ಈಗಾಗಲೇ ಸಾವಿರಾರು ಮಂದಿ ಪೆÇೀಷಕರು ಮನೆಯ ಸಮೀಪದ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಲು ಆರ್‍ಟಿಇ ಅಡಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನಿಯಮದಂತೆ ಅರ್ಹ ಅರ್ಜಿಗಳನ್ನು ಈಗಾಗಲೇ ವಿಂಗಡಿಸಲಾಗಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿಂದು ಲಾಟರಿ ಎತ್ತುವ ಮೂಲಕ ಮಕ್ಕಳು ಯಾವ ಶಾಲೆಗೆ ದಾಖಲಾತಿ ಪಡೆಯುತ್ತಾರೆ ಎಂಬುದು ತಿಳಿದು ಬರಲಿದೆ.

ರಾತ್ರಿ ವೇಳೆಗೆ ಪೆÇೀಷಕರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ಕೂಡ ಸಿಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಇದು ಮೊದಲ ಸುತ್ತಿನ ಪ್ರಕ್ರಿಯೆ. ಇನ್ನೂ ಹಲವು ದಿನಗಳು ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ