ಎಂ.ಡಿ.ಲಕ್ಷ್ಮೀನಾರಾಯಣ್ ರಾಜೀನಾಮೆ ಅಂಗೀಕಾರ

ಬೆಂಗಳೂರು,ಏ.21-ವಿಧಾನಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ತಮ್ಮ ಸದಸ್ಯ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನ ಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಂಗೀಕರಿಸಿದ್ದಾರೆ.

ಎಂ.ಡಿ.ಲಕ್ಷ್ಮೀನಾರಾಯಣ್ ಅವರು ಇಂದು ಬೆಳಗ್ಗೆ ರಾಜೀನಾಮೆ ಪತ್ರವನ್ನು ಸಭಾಪತಿ ಅವರಿಗೆ ಸಲ್ಲಿಸಿದರು. ನಂತರ ಸಭಾಪತಿಯವರು ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ.
ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀನಾರಾಯಣ್ ಸ್ಪರ್ಧಿ ಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ