ಅತಿಯಾದ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಮೃತ:

ಮಧುಗಿರಿ, ಏ.21-ಅತಿಯಾದ ಮದ್ಯ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ತಾಲ್ಲೂಕಿನ ಬಂದ್ರೇಹಳ್ಳಿ ಗ್ರಾಮದ ನಿವಾಸಿ ಸುಬ್ಬರಾಯಪ್ಪ (42) ಮೃತಪಟ್ಟ ವ್ಯಕ್ತಿ.
ನಿನ್ನೆ ಪಕ್ಷವೊಂದರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಗ್ರಾಮದಿಂದ ಟ್ರ್ಯಾಕ್ಟರ್‍ನಲ್ಲಿ ಸುಬ್ಬರಾಯಪ್ಪ ಮತ್ತು ಸಂಗಡಿಗರು ಮಧುಗಿರಿ ಪಟ್ಟಣಕ್ಕೆ ತೆರಳಿದ್ದರು.
ಈ ವೇಳೆ ಅತಿಯಾಗಿ ಮದ್ಯ ಸೇವಿಸಿ ದಂಡಿಮಾರಮ್ಮ ದೇವಾಲಯದ ಆವರಣದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶವವನ್ನು ಅದೇ ಟ್ರ್ಯಾಕ್ಟರ್‍ನಲ್ಲಿ ಗ್ರಾಮಕ್ಕೆ ಕೊಂಡೊಯ್ದು ಮೃತರ ಮನೆಯ ಮುಂದೆ ಇಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಸುಬ್ಬರಾಯಪ್ಪ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು , ಕೆಲ ಮುಖಂಡರು ಕಾರ್ಯಕ್ರಮಕ್ಕೆ ಬರುವಂತೆ ಕರೆದುಕೊಂಡು ಹೋಗಿ ಮದ್ಯ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ