ಔರಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಪ್ರಭು ಚವ್ಹಾಣ್ ಶನಿವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕ್ಕೆ

*ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ
ಬೀದರ್: ಔರಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಪ್ರಭು ಚವ್ಹಾಣ್ ಶನಿವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.
ಸಾವಿರಾರು ಬೆಂಬಲಿಗರು, ಪಕ್ಷದ ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ಬೃಹತ್ ರ್ಯಾಲಿ ಮೂಲಕ ತಹಸಿಲ್ ಕಚೇರಿಗೆ ಆಗಮಿಸಿ ಸಮಾವೇಶಗೊಂಡಿತು.

ದಾರಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮೋದಿಗೆ ಜಯವಾಗಲಿ, ಬಿಜೆಪಿ ಪಕ್ಷಕ್ಕೆಜಯವಾಗಲಿ, ಪ್ರಭು ಚವ್ಹಾಣ್‍ಜಿ ಆಪ್ ಆಗೆ ಬಡೋ ಹಮ್ ಆಪಕೆ ಸಾಥ್ ಹೈ ಎಂದು ಜಯಘೋಷ ಹಾಕಿದರು.

ಸುಡುಬಿಸಿಲು ಲೆಕ್ಕಿಸದೇ ಕಾರ್ಯಕರ್ತರು ಭಾಗವಹಿಸಿದ್ದರು. ಪಟ್ಟಣದ ಮುಖ್ಯ ರಸ್ತೆಗಳು ಬಿಜೆಪಿ ಧ್ವಜಗಳಿಂದ ರಾರಾಜಿಸಿದವು. ತೆರೆದ ವಾಹನದಲ್ಲಿ ಶಾಸಕ ಪ್ರಭು ಚವ್ಹಾಣ್, ಎಂಎಲ್ಸಿ ರಘುನಾಥರಾವ ಮಲ್ಕಾಪುರೆ ಇತರರಿದ್ದರು.
=============================

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ