ಕಾಂಗ್ರೆಸ್ ಟಿಕೆಟ್ ವಂಚಿತರ ಮನವೊಲಿಕೆ ಕಾರ್ಯ: ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡರಿಂದ ¥ಕ್ಶÀದಲ್ಲೇ ಕಾರ್ಯಕರ್ತರಾಗಿ ಮುಂದುವರೆಯುವುದಾಗಿ ಭರವಸೆ

ಬೆಂಗಳೂರು, ಏ.22-ಕಾಂಗ್ರೆಸ್ ಟಿಕೆಟ್ ವಂಚಿತರ ಮನವೊಲಿಕೆ ಕಾರ್ಯ ಆರಂಭಗೊಂಡಿದ್ದು, ಇಂದು ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಾಗಿ ಮುಂದುವರೆಯುವುದಾಗಿ ಭರವಸೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಸೋದರ ಸಂಬಂಧಿಯಾದ ಡಾ.ರಂಗನಾಥ್ ಅವರಿಗೆ ಈ ಬಾರಿ ವಿಧಾನಸಭೇ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿ ಫಾರಂ ನೀಡಿತ್ತು. ಅದನ್ನು ವಿರೋಧಿಸಿ ಬಿ.ಬಿ.ರಾಮಸ್ವಾಮಿ ಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಡಿ.ಕೆ.ಶಿವಕುಮಾರ್ ಅವರು ನಡೆಸಿದ ಸತತ ಸಂಧಾನ ಫಲದಿಂದಾಗಿ ರಾಮಸ್ವಾಮಿಗೌಡ ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದು, ಕಾಂಗ್ರೆಸ್‍ನಲ್ಲೇ ಮುಂದುವರೆಯುವುದಾಗಿ ಮತ್ತು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.

ಇಂದು ಬೆಳಗ್ಗೆ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಮಸ್ವಾಮಿ ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ