ಚನ್ನಕೇಶವ ನಗರದಲ್ಲಿ ಏ.24 ಹಾಗೂ 25ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿಯ ರಥೋತ್ಸವ

 

ಬೆಂಗಳೂರು,ಏ.22- ಚನ್ನಕೇಶವ ನಗರದಲ್ಲಿ ಏ.24ರ ಬೆಳಗ್ಗೆ 6ರಿಂದ 25ರಂದು ಶ್ರೀ ರೇಣುಕಾ ಯಲ್ಲಮ್ಮ ದೇವಿಯ ರಥೋತ್ಸವ ಹಾಗೂ ಹೂವಿನ ಪಲ್ಲಕ್ಕಿಉತ್ಸವ , ಧರ್ಮಸ್ವಾಮಿ ಕರಗ ನಡೆಯಲಿರುವುದರಿಂದ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಪರಪ್ಪನ ಅಗ್ರಹಾರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಏ.24ರ ಬೆಳಗ್ಗೆ 6ರಿಂದ 25ರ ಬೆಳಗಿನವರೆಗೆ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‍ಗಳು, ವೈನ್‍ಶಾಪ್‍ಗಳನ್ನು ಮುಚ್ಚುವಂತೆ ಹಾಗೂ ಮದ್ಯ ಮಾರಾಟ ಮಾಡದಂತೆ ನಗರ ಪೆÇಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ಆದೇಶಿಸಿದ್ದಾರೆ.

ಅಂದು ರಾತ್ರಿ ಹೂವಿನ ಪಲ್ಲಕಿ ಉತ್ಸವ, ಧರ್ಮರಾಯ ಸ್ವಾಮಿ ಕರಗವು ನಡೆಯಲಿದ್ದು , ನಗರದ ವಿವಿಧ ಪ್ರದೇಶಗಳಿಂದ ಸಾವಿರಾರು ಭಕ್ತಾಧಿಗಳು ಭಾಗವಹಿಸಲಿದ್ದಾರೆ.
ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾಗದಲ್ಲಿನ ಎಲ್ಲ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಆದೇಶಿಸಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ