ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿ:

ಪಾಂಡವಪುರ, ಏ.22- ದುಷ್ಕರ್ಮಿಗಳು ಪೆಟ್ಟಿಗೆ ಅಂಗಡಿಗೆ ಬೆಂಕಿ ಹಚ್ಚಿದ ಪರಿಣಾಮ ಪೆಟ್ಟಿ ಅಂಗಡಿಯಲ್ಲಿದ್ದ ನಗದು ಸೇರಿದಂತೆ ದಿನಸಿ ವಸ್ತುಗಳು ಬೆಂಕಿಗಾಹುತಿಯಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ಘಟನೆ ತಾಲೂಕಿನ ಎಸ್.ಕೊಡಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ದುಷ್ಕರ್ಮಿಗಳು ಗ್ರಾಮದ ಮಹದೇವ ಎಂಬುವವರಿಗೆ ಸೇರಿದ ಪೆಟ್ಟಿ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾದಾಗ ಪೆಟ್ಟಿಗೆ ಅಂಗಡಿಯ ಎದುರಿನ ಮನೆಯಲ್ಲೇ ವಾಸವಿದ್ದ ಮಾಲೀಕರಿಗೆ ಬೆಂಕಿ ಹಚ್ಚಿರುವುದು ತಕ್ಷಣವೇ ಗಮನಕ್ಕೆ ಬಂದಿದೆ. ಈ ವೇಳೆ ಪೆಟ್ಟಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದರಿಂದ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಅಂಗಡಿಯಲ್ಲಿ 5 ಸಾವಿರ ನಗದು ಸೇರಿದಂತೆ ವ್ಯಾಪಾರಕ್ಕಾಗಿ ಸಂಗ್ರಹಿಸಿದ್ದ ದಿನಸಿ ಪದಾರ್ಥಗಳು ಹಾಗೂ ಅಂಗಡಿ ಸೇರಿದಂತೆ 1.30 ಲಕ್ಷ ರೂ. ನಷ್ಷ ಸಂಭವಿಸಿದೆ ಎಂದು ಮಾಲೀಕ ಮಹದೇವು ತಿಳಿಸಿದ್ದಾರೆ.
ಸ್ಥಳಕ್ಕೆ ಜಿಪಂ ಸದಸ್ಯ ಸಿ.ಅಶೋಕ್ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಸಾಂತ್ವನ ಹೇಳಿದರು. ಘಟನೆ ಸಂಬಂಧ ಮೇಲುಕೋಟೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ