ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ರಸ್ತೆ ಬದಿ ಎಸೆದು ಪರಾರಿ:

ಮೈಸೂರು, ಏ.23- ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿ ರಸ್ತೆ ಬದಿ ಎಸೆದು ಪರಾರಿಯಾಗಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾಗಿರುವ ವ್ಯಕ್ತಿ ಸುಮಾರು 40ರಿಂದ 45 ವರ್ಷದಂತೆ ಕಾಣುತ್ತಿದ್ದು ಹೆಸರು, ವಿಳಾಸ ತಿಳಿದು ಬಂದಿಲ್ಲ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಗೋ ಹಳ್ಳಿ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮುಖ, ಕೈ, ಕಾಲುಗಳನ್ನು ಪ್ಲಾಸ್ಟಿಕ್ ಚೀಲದಿಂದ ಕಟ್ಟಿ ರಸ್ತೆ ಬದಿ ಬಿಸಾಡಿದ್ದು ಮೂಗು ಹಾಗೂ ಬಾಯಲ್ಲಿ ರಕ್ತದ ಕಲೆ ಇದೆ. ದುಷ್ಕರ್ಮಿಗಳು ಈ ವ್ಯಕ್ತಿಯನ್ನು ಬೇರೆಡೆ ಕೊಲೆ ಮಾಡಿ ಈ ಜಾಗದಲ್ಲಿ ತಂದು ಬಿಸಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸುದ್ದಿ ತಿಳಿದ ಬಿಳಿಕೆರೆ ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಸರ್ಕಾರಿ ಆಸ್ಪತ್ರೆಯಗೆ ಶವವನ್ನು ರವಾನಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ