ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ

ಬೆಂಗಳೂರು, ಏ.24- ಮನೆಯೊಂದರಲ್ಲಿ ಗೃಹಿಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಪತಿಯೇ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಮೂಲತಃ ಚಿತ್ತೂರು ನಿವಾಸಿಯಾದ ವಾಣಿಶ್ರೀ (26) ಕೊಲೆಯಾದ ಗೃಹಿಣಿ. ಘಟನೆ ಸಂಬಂಧ ಈಕೆಯ ಪತಿ ಗಜೇಂದ್ರನನ್ನು ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಆರು ವರ್ಷಗಳ ಹಿಂದೆ ವಾಣಿಶ್ರೀ ಅವರನ್ನು ಗಜೇಂದ್ರ ಎಂಬುವವರು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಮುಂಜಾನೆ 3.30ರಲ್ಲಿ ವಾಣಿಶ್ರೀ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.
ಸುದ್ದಿ ತಿಳಿದ ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ