ಇಂದೂ ಪ್ರಕಟವಾಗದ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ

ಬೆಂಗಳೂರು, ಏ.24-ಜೆಡಿಎಸ್‍ನಲ್ಲಿ ಕಡೇ ದಿನವಾದ ಇಂದೂ ಕೂಡ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗದಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಕಣಕ್ಕಿಳಿಸಲಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದಿಂದ ರವಿಕುಮಾರ್ ಅವರ ಬದಲಾಗಿ ಕಾಳೇಗೌಡರಿಗೆ ಟಿಕೆಟ್ ನೀಡಲಾಯಿತು. ಅದೇ ರೀತಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಂ.ರಾಜಣ್ಣ ಅವರ ಬದಲಾಗಿ ರವಿಕುಮಾರ್ ಅವರಿಗೆ ಟಿಕೆಟ್ ನೀಡಲಾಯಿತು.

ಇದರಿಂದ ಬೇಸತ್ತ ರಾಜಣ್ಣ ಅವರು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೊನೆ ಘಳಿಗೆವರೆಗೂ ನಿರ್ಮಾಪಕ ಕೆ.ಮಂಜು ಅವರ ಹೆಸರು ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಉದ್ಯಮಿ ಟಿ.ಆರ್.ಪ್ರಸಾದ್‍ಗೌಡ ಅವರಿಗೆ ಟಿಕೆಟ್ ನೀಡಲಾಯಿತು. ಇಂದು ಜೆಡಿಎಸ್ ಅಭ್ಯರ್ಥಿಯಾಗಿ ಅವರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ.

ಇದೇ ರೀತಿ ಇನ್ನು ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸಿ ಜೆಡಿಎಸ್ ವರಿಷ್ಠರು ಬಿ ಫಾರಂ ನೀಡಿದ್ದು, ಅವರೆಲ್ಲರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ