ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಬೆಂಗಳೂರು, ಏ.24- ಇಬ್ಬರು ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಟಿ ಮಾರ್ಕೆಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಮಣಿಪುರದ ಅಬ್ಬು ಅಲಿಯಾಸ್ ಹುಸೇನ್ (20) ಕೊಲೆಯಾದ ಯುವಕ.
ಶಿವಾಜಿನಗರದ ಬಾರ್ ಅಂಡ್ ರೆಸ್ಟೋರೆಂಟ್ ಪಕ್ಕದ ಜ್ಯೂಸ್ ಸೆಂಟರ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಬ್ಬು, ಸೀಗೆಬೇಲಿ ರಸ್ತೆಯ ಖುರೇಶಿ ಮಸೀದಿ ಬಳಿ ರೂಮ್ ಮಾಡಿಕೊಂಡು ಜಮ್ಮಾಖಾನ್ ಎಂಬಾತನ ಜತೆ ವಾಸವಾಗಿದ್ದನು.

ಇವರಿಬ್ಬರ ಮಧ್ಯೆ ಯಾವುದೋ ವಿಚಾರವಾಗಿ ಜಗಳ ನಡೆದಿದೆ. ರಾತ್ರಿ 11.15ರಲ್ಲಿ ಅಬ್ಬು ಕೆಲಸ ಮುಗಿಸಿಕೊಂಡು ರೂಮ್ ಬಳಿ ಬರುತ್ತಿದ್ದಾಗ ಈತನನ್ನು ಅಡ್ಡ ಹಾಕಿದ ಸ್ನೇಹಿತ ಜಮ್ಮಾಖಾನ್ ಜಗಳವಾಡಿ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ.
ಗಂಭೀರವಾಗಿ ಗಾಯಗೊಂಡ ಈತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸುದ್ದಿ ತಿಳಿದ ಸಿಟಿ ಮಾರ್ಕೆಟ್ ಠಾಣೆ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆರೋಪಿಗಾಗಿ ತನಿಖೆ ಕೈಗೊಂಡಿದ್ದಾರೆ.
ಯುವತಿ ವಿಚಾರವಾಗಿ ಇವರಿಬ್ಬರ ಮಧ್ಯೆ ಜಗಳವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ