ನನ್ನ ಮಗ ಹರೀಶ್ ಗೌಡ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ – ಜಿ.ಟಿ.ದೇವೇಗೌಡ

ಮೈಸೂರು, ಏ.24- ನನ್ನ ಮಗ ಹರೀಶ್ ಗೌಡ ವರುಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಲ್ಲ ಎಂದು ಶಾಸಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವರುಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸದ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ನನ್ನ ಪುತ್ರ ಹರೀಶ್‍ಗೌಡನನ್ನು ಕಣಕ್ಕಿಳಿಸುವಂತೆ ಆ ಕ್ಷೇತ್ರದ ಜನತೆ ಕೇಳುತ್ತಿದ್ದಾರೆ. ಒಂದು ಪೃಸೆಯನ್ನೂ ಖರ್ಚು ಮಾಡಬೇಡಿ. ನಾವು ಗೆಲ್ಲಿಸಿಕೊಳ್ಳುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಜನತೆ ಹರೀಶ್‍ಗೌಡ ನಮ್ಮೊಂದಿಗೆ ಇರಬೇಕೆಂದು ಒತ್ತಾಯಿಸುತ್ತಿದ್ದಾರೆ. ಹಾಗಾಗಿ ನನ್ನ ಮಗ ಹರೀಶ್ ಎಲ್ಲಿಯೂ ಸ್ಪರ್ಧಿಸುವುದಿಲ್ಲ. ಚಾಮುಂಡೇಶ್ವರಿಯಲ್ಲಿ ನನ್ನೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾನೆ. ನಾನು ವರುಣ ಕ್ಷೇತ್ರದ ಜನತೆಯ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಕ್ಷೇತ್ರದ ಜನತೆ ಯಾವುದೆ ಊಹಾಪೆÇೀಹಗಳನ್ನು ನಂಬಬಾರದು. ಜೆಡಿಎಸ್‍ನಿಂದ ವರುಣ ಕ್ಷೇತ್ರದಲ್ಲಿ ಅಭಿಷೇಕ್ ಎಂಬುವವರೇ ಸ್ಪರ್ಧಿಸುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ .ಅವರ ಗೆಲುವಿಗೆ ಕಾರ್ಯಕರ್ತರು ಸಹಕರಿಸಬೇಕೆಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ