ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ! – ರಾಜ್ಯ ರೈತ ಸಂಘ

ಕನಕಪುರ, ಏ.24-ಈ ಬಾರಿಯ ವಿಧಾನಸಭಾ ಚುನಾವಣೆಗೆ ಕನಕಪುರ ಕ್ಷೇತ್ರದಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿಲ್ಲ ಎಂದು ಕನ್ಟಾಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅನಂತರಾಂ ಪ್ರಸಾದ್ ತಿಳಿಸಿದ್ದಾರೆ.
ಯಾವುದೇ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಹೇಳಿರುವ ಅವರು, ರೈತರ ಚಳವಳಿಯಲ್ಲಿ ತೊಡಗಿಸಿಕೊಂಡವರಿಗೆ, ಪ್ರಣಾಳಿಕೆಯಲ್ಲಿ ಯಾವ ಪಕ್ಷ ರೈತರಿಗೆ ಹೆಚ್ಚು ಒತ್ತು ನೀಡುತ್ತದೆ ಎಂಬುದನ್ನು ನೋಡಿಕೊಂಡು ಕಾರ್ಯಕರ್ತರೊಂದಿಗೆ ಚರ್ಚಿಸಿ ಅಂತಹ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ಕಾರ್ಯದರ್ಶಿ ನಾರಾಯಣಸ್ವಾಮಿ, ಪದಾಧಿಕಾರಿಗಳಾದ ಗುಂಡಯ್ಯ, ಶ್ರೀನಿವಾಸ್ ಈ ವೇಳೆ ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ