ಔರಾದ್ ಕ್ಷೇತ್ರದಲ್ಲಿ ಪ್ರಭು ಚವ್ಹಾಣ್ ಭರ್ಜರಿ ಪ್ರಚಾರ

ಬೀದರ್, ಏ. 27- ಔರಾದ್ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಶುಕ್ರವಾರ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಪ್ರಚಾರ ನೆಸಿದರು. ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಕ್ಷೇತ್ರದ ಭಂಡಾರ ಕಮಟಾ, ಖೇಡ್, ಹಂದಿಕೇರಾ, ಬೀಜಲಗಾಂವ, ಡೊಂಗರಗಾಂವ, ಮಾಳೆಗಾಂವ ಸೇರಿ ವಿವಿಧ ಗ್ರಾಮಗಳಿಗೆ ಶಾಸಕ ಪ್ರಭು ಚವ್ಹಾಣ್ ಭೇಟಿ ನೀಡಿ ಪ್ರಚಾರ ನಡೆಸಿದರು.
ಈ ವೇಳೆ ಮಾತನಾಡಿದ ಚವ್ಹಾಣ್, ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿz್ದÁರೆ. ಪಕ್ಷದ ಎಲ್ಲ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಆಯಾ ಕ್ಷೇತ್ರದಲ್ಲಿ ಸಂಚರಿಸಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿ ಬಿಜೆಪಿಗೆ ಬೆಂಬಲಿಸಬೇಕು ಎಂದರು.

ಉತ್ತರ ಪ್ರದೇಶದಲ್ಲಿ ಹೇಗೆ ಅಧಿಕಾರಕ್ಕೆ ಬಂದವೋ ಅದೇ ರೀತಿ ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗಳಿಸುವ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ಪಕ್ಕಾ.

ಕಾಂಗ್ರೆಸ್‍ಗೆ ಈ ಬಾರಿ 50 ರಿಂದ 60 ಸ್ಥಾನಗಳನ್ನು ಗಳಿಸಲಿದೆ. ರಾಜ್ಯದ ಜನ ಈ ಬಾರಿ ಪರಿವರ್ತನೆ ಬಯಸಿದ್ದಾರೆ ಎಂದು ಹೇಳಿದರು.

ಪ್ರಮುಖರಾದ ಅನೀಲ ಗುಂಡಪ್ಪ, ವಸಂತ ಬಿರಾದಾರ, ಸತೀಶ್ ಕಟ್ಟೆ, ರಮೇಶ ದೇವಕತ್ತೆ, ಸಚಿನ್ ರಾಠೋಡ್, ಕೆ.ಎನ್. ಪಾಟೀಲ್, ಅನಂತ ಸಾವಳೆ ಇತರರಿದ್ದರು.
==========================

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ