ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ, ಸಂಭಾಷಣೆ ವೈರಲ್

ಮೈಸೂರು ,ಏ.27-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅಭಿಮಾನಿಯೊಬ್ಬ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ದೂರವಾಣಿ ಕರೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹೇಳಿರುವ ಸಂಭಾಷಣೆ ಎಲ್ಲೆಡೆ ವೈರಲ್ ಆಗಿದೆ.
ವರುಣಾ ಕ್ಷೇತ್ರದಲ್ಲಿ ಸ್ಫರ್ಧಿಸಲು ಬಿಜೆಪಿಯಿಂದ ವಿಜಯೇಂದ್ರ ಅವರಿಗೆ ಟಿಕೆಟ್ ನೀಡದ ಬಗ್ಗೆ ಅಸಮಾಧಾನಗೊಂಡಿರುವ ಅಭಿಮಾನಿ ರಘು ಎಂಬಾತ ಕ್ಷೇತ್ರ ಅಭ್ಯರ್ಥಿಯಾಗಿ ಟಿಕೆಟ್ ಪಡೆದಿರುವ ತೊಟದಪ್ಪ ಬಸವರಾಜು ಅವರಿಗೆ ದೂರವಾಣಿ ಕರೆ ಮಾಡಿ ನೀವು ಚುನಾವಣೆಗೆ ಸ್ಪರ್ಧಿಸಬಾರದು ವಿಜಯೇಂದ್ರ ಅವರಿಗೆ ಟಿಕೆಟ್ ನೀಡದಿದ್ದರೆ ನಮಗ್ಯಾರಿಗೂ ಟಿಕೆಟ್ ಬೇಡ ಎಂದು ಹೇಳಿದ್ದಾರೆ. ನಾವು ಸಹ ಟಿಕೆಟ್ ತಿರಸ್ಕರಿಸಬೇಕಿತ್ತು. ನಾವು ಟಿಕೆಟ್ ಪqಯದಿದ್ದರೆ ವಿಜಯೇಂದ್ರ ಅವರಿಗೆ ಅವಕಾಶ ಸಿಗುತ್ತಿತ್ತು ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರಿಗೆ ಟಿಕೆಟ್ ಸಿಗದಿರುವುದರಿಂದ ನೋಟಾ ಎಂಬ ಅಭಿಯಾನ ನಡೆಸುತ್ತಿದ್ದೇವೆ ನಿಮಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಅದಕ್ಕೆ ಉತ್ತರಿಸಿದ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು ಅವರು ನೋಟಾ ಅಭಿಯಾನ ನಮಗೂ ಗೊತ್ತು. ವೋಟ್ ಹಾಕುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ. ಬಿಜೆಪಿ ಕಾರ್ಯಕರ್ತರು ನಮ್ಮನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ಇಲ್ಲದಿದ್ದರೆ ನಿಮ್ಮನ್ನು ಸೋಲಿಸುತ್ತೇವೆ. ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿಸಿರುವ ನಿಮ್ಮನ್ನು ಸೋಲಿಸಯೇ ಸೋಲಿಸುತ್ತೇವೆ ಎಂದಿದ್ದಾರೆ.
ಅದಕ್ಕೆ ಮತ್ತೆ ಅಭ್ಯರ್ಥಿ ತೋಟದಪ್ಪ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ ಒಂದು ಟೀಂ ಬರಲಿದೆ ಅವರು ನಿಮ್ಮ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಅವರೊಂದಿಗೆ ನಾವು ಕೈ ಜೋಡಿಸಿ ಎಂದು ಹೇಳಿದರೂ ಮತ್ತೆ ನಾವು ವಿಜಯೇಂದ್ರ ಅಭಿಮಾನಿ ಅವರಿಗೆ ಟಿಕೆಟ್ ಸಿಗಬೇಕಿತ್ತು. ಅದು ತಪ್ಪಿಸಿ ನಿಮ್ಮನ್ನು ಸೋಲಿಸುತ್ತೇವೆ ಎಂಬ ಸಂಭಾಷಣೆ ವೈರಲ್ ಆಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ