ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ

ಹೊಳಸಮುದ್ರದಲ್ಲಿ ಹಲವರು ಬಿಜೆಪಿ ಸೇರ್ಪಡೆ
ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ
ಬೀದರ್, ಏ.29 -ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕ್ಷೇತ್ರದ ಜನತೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಔರಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಕರೆ ನೀಡಿದರು.

ಭಾನುವಾರ ಕ್ಷೇತ್ರದ ಕುಶನೂರ, ಹೊಳಸಮುದ್ರ, ಸಾವಳಿ, ಮುಧೋಳ, ರಕ್ಷ್ಯಾಳ, ಬೆಳಕುಂದಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಿದರು. ರಾಜ್ಯದಲ್ಲಿ ಬಿಜೆಪಿ 150 ಸೀಟು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿ ಧ್ಯೇಯದೊಂದಿಗೆ ಚುನಾವಣೆ ಅಖಾಡಕ್ಕೆ ಇಳಿದಿz್ದÉೀನೆ. ಎಲ್ಲೆಡೆ ಅತ್ಯುತ್ತಮ ಪ್ರತಿಕ್ರಿಯೆ ಬರುತ್ತಿದೆ. ಸರ್ವ ಸಮುದಾಯದವರ ಆಶಿರ್ವಾದ ಸಿಗುತ್ತಿದೆ. ಈ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವ ವಿಶ್ವಾಸವಿದೆ. ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ ಯಡಿಯೂರಪ್ಪ ಅವರ ಕೈಬಲಪಡಿಸೋಣ ಎಂದರು.

ಚುನಾವಣೆ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪಕ್ಷದ ಪದಾýಕಾರಿಗಳು ಹಾಗೂ ಕಾರ್ಯಕರ್ತರು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಿ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಪ್ರಮುಖರಾದ ಅನೀಲ ಬಿರಾದಾರ, ವಸಂತ ಬಿರಾದಾರ, ಸತೀಶ ಪಾಟೀಲ್, ಅರಹಂತ ಸಾಳೆ, ಕಿರಣ ಪಾಟೀಲ್, ಸಚಿನ್ ರಾಠೋಡ್ ಇತರರಿದ್ದರು.
ಸೇರ್ಪಡೆ: ಔರಾದ್ ಕ್ಷೇತ್ರದ ಹೊಳಸಮುದ್ರ ಗ್ರಾಮಕ್ಕೆ ಪ್ರಚಾರಕ್ಕೆ ಹೋಗಿದ್ದ ಪ್ರಭು ಚವ್ಹಾಣ್ ಸಮ್ಮುಖ ಹಲವರು ಬಿಜೆಪಿಗೆ ಸೇರ್ಪಡೆಯಾದರು. ಮುಖಂಡ ಭರತ ಕದಂ ನೇತೃತ್ವ ತಂಡ ಬಿಜೆಪಿಗೆ ಸೇದಿರು. ಇವರಿಗೆ ಪ್ರಭು ಚವ್ಹಾಣ್ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ