ನಾಳೆ ಯಾದಗಿರಿ, ಕಲಬುರಗಿ ಜಿಲ್ಲೆಯಲ್ಲಿ ಸಿಎಂ ಪ್ರಚಾರ

ಬೆಂಗಳೂರು, ಏ.29-ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ನಿರಂತರ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಯಾದಗಿರಿ, ಕಲಬುರಗಿ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಕ್ಕೇರಿಯಲ್ಲಿ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿರುವ ಅವರು, ಒಂದು ಗಂಟೆಗೆ ಅಫ್ಜಲ್‍ಪುರ ಕ್ಷೇತ್ರ, 3.30ಕ್ಕೆ ಆಳಂದ, 5 ಗಂಟೆಗೆ ಚಿಂಚೋಳಿ, 7 ಗಂಟೆಗೆ ಚಿತ್ತಾಪುರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು, ರಾತ್ರಿ 9 ಗಂಟೆಗೆ ರಾಯಚೂರು ಜಿಲ್ಲೆಯಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ರಾಯಚೂರಿನಲ್ಲಿ ವಾಸ್ತವ್ಯ ಹೂಡಿ ಮೇ 1 ರಂದು ಗದಗ ಮತ್ತು ಧಾರವಾಡ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ನರಗುಂದದಲ್ಲಿ, 1ಗಂಟೆಗೆ ರೋಣದಲ್ಲಿ , ಮಧ್ಯಾಹ್ನ 3.30ಕ್ಕೆ ಧಾರವಾಡದ ನವಲಗುಂದ, 5 ಗಂಟೆಗೆ ಕುಂದಗೋಳ, 7 ಗಂಟೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ರಾತ್ರಿ ಧಾರವಾಡದಲ್ಲಿ ತಂಗಲಿದ್ದಾರೆ.
ಮೇ 2 ರಂದು ಹಾವೇರಿ ಬಳ್ಳಾರಿ ಜಿಲ್ಲೆಯಲ್ಲೂ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ 11.30ಕ್ಕೆ, ಮಧ್ಯಾಹ್ನ 1 ಗಂಟೆಗೆ ಬ್ಯಾಡಗಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬಳ್ಳಾರಿಯ ಕೂಡ್ಲಗಿಯಲ್ಲಿ 3.30ಕ್ಕೆ, ಕಂಪ್ಲಿಯಲ್ಲಿ 5 ಗಂಟೆಗೆ ಸಿರಗುಪ್ಪದಲ್ಲಿ 7 ಗಂಟೆಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ