ಚಿಕಿತ್ಸೆ ಫಲಕಾರಿಯಾಗದೆ ಆನೆ ಮೃತ:

ಮೈಸೂರು, ಏ.29- ಗುಂಡೇಟಿನಿಂದ ಗಾಯಗೊಂಡಿದ್ದ ಗಂಡಾನೆಯೊಂದು ಇಂದು ಬೆಳಗ್ಗೆ ಸಾವನ್ನಪ್ಪಿದೆ. ಸೋಮವಾರ ಪೇಟೆ ತಾಲ್ಲೂಕು ದುಬಾರೆ ಅರಣ್ಯ ಪ್ರದೇಶದಲ್ಲಿದ್ದ ಗಂಡಾನೆಗೆ ಕೆಲವು ದಿನಗಳ ಹಿಂದೆ ಗುಂಡೇಟು ಬಿದ್ದಿತ್ತು.
ಗುಂಡೇಟಿನಿಂದ ನಿತ್ರಾಣಗೊಂಡಿದ್ದ ಆನೆಗೆ ವನ್ಯಜೀವಿ ವೈದ್ಯಾಧಿಕಾರಿ ಮುಜೀಬ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಆನೆ ಮೃತಪಟ್ಟಿದೆ. ಸುದ್ದಿ ತಿಳಿದ ಕೂಡಲೇ ಇಲಾಖೆಯ ಅರಣ್ಯಾದಿಕಾರಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ