ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಂದೆ ನೀರಿನಲ್ಲಿ ಮುಳುಗಿ ಮೃತ:

ನಾಗಮಂಗಲ, ಏ.30-ಮುಳುಗುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಂದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಫೈರೋಜ್ ಮೃತಪಟ್ಟ ತಂದೆ.
ಇಂದು ಬೆಳಗ್ಗೆ ತಂದೆ ಮತ್ತು ಮಗು ಬಟ್ಟೆ ತೊಳೆಯಲೆಂದು ಬೀರೇಶ್ವರ ಗ್ರಾಮದ ಕೆರೆಗೆ ತೆರಳಿದ್ದಾರೆ. ಈ ವೇಳೆ ಮಗು ಕಾಲುಜಾರಿ ಬಿದ್ದಿದೆ. ಮಗುವನ್ನು ರಕ್ಷಿಸಲು ಹೋದ ತಂದೆ ಫೈರೋಜ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅಸ್ವಸ್ಥಗೊಂಡಿದ್ದ ಮಗುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಂದೆಗೆ ಈಜು ಬರುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ನಾಗಮಂಗಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ