ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾರ

ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಅವರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಪಾದಯಾತ್ರೆ ಕೈಗೊಂಡು ಮತಯಾಚನೆ ಮಾಡಿದರು.

ಕೌಠಾ (ಬಿ), ಕೌಠಾ (ಕೆ), ಬಲ್ಲೂರ, ಪಾಶಾಪುರ, ಗಡಿ ಕುಶನೂರ, ಆಲೂರ (ಕೆ), ಆಲೂರ (ಬಿ), ಬೇಲೂರ, ಲಾಧಾ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿದ ವಿಜಯಕುಮಾರ ಕೌಡಾಳ, ಸಿಎಂ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಮತ ಕೋರಿದರು. ಎಲ್ಲ ವರ್ಗದ ಹಿತ ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಎಲ್ಲ ಸಮಾಜದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಆಡಳಿತ ನೀಡಿದೆ. ರಾಜ್ಯದ ಹಿಂದುಳಿದ ಔರಾದ್ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುವ ವಿಜನ್ ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲಿಸುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಪ್ರಮುಖರಾದ ಚಂದ್ರಕಾಂತ ಹಿಪ್ಪಳಗಾಂವ, ಬಸವರಾಜ ಮಾಳಗೆ, ಮಾಳಪ್ಪ ಅಡಸಾರೆ, ರತಿಕಾಂತ ಸ್ವಾಮಿ, ರಮೇಶ ಬಿರಾದಾರ, ಬಾಲಾಜಿ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ