ಶಾಸಕ ಬಿ.ಎನ್.ವಿಜಯ್‍ಕುಮಾರ್ ನಿಧನಕ್ಕೆ ಯದುಗಿರಿ ಯತಿರಾಜ ಮಠದ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸಂತಾಪ

ಬೆಂಗಳೂರು, ಮೇ 4- ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರ ನಿಧನಕ್ಕೆ ಯದುಗಿರಿ ಯತಿರಾಜ ಮಠದ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅತ್ಯಂತ ಸರಳ-ಸಜ್ಜನಿಕೆ ಮತ್ತು ಜನಪ್ರಿಯರಾಗಿದ್ದ ವಿಜಯ್‍ಕುಮಾರ್ ಅವರು ಹಠಾತ್ ನಿಧನರಾಗಿದ್ದು, ನಮಗೆ ತೀವ್ರ ನೋವು ತಂದಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ತಮ್ಮ ಸಂತಾಪದಲ್ಲಿ ಶ್ರೀಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ