ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶ

ದಾವಣಗೆರೆ, ಮೇ 4- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸಾಗಾಟ ಮಾಡುತ್ತಿದ್ದ ಅಕ್ರಮ ಮದ್ಯ ವಶಪಡಿಸಿಕೊಂಡು ಅಬಕಾರಿ ಇಲಾಖೆ ಪ್ರಕರಣ ದಾಖಲಿಸಿದೆ.
ಅಬಕಾರಿ ಆಯುಕ್ತ ವೈ.ಆರ್.ಮೋಹನ್ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕ ರಮೇಶ್ ಬಿ.ಅಗಡಿ ಮತ್ತು ಸಿಬ್ಬಂದಿಯೊಂದಿಗೆ ಎನ್‍ಹೆಚ್-4 ರಸ್ತೆಯಲ್ಲಿ ರಾಜೇಹಳ್ಳಿ ಕ್ರಾಸ್‍ನಲ್ಲಿ ರಸ್ತೆಗಾವಲು ನಡೆಸುತ್ತಿರುವಾಗ ಅನುಮಾನಾಸ್ಪದ ಬೈಕ್‍ನ್ನು ತಡೆದಾಗ ಸವಾರ ಪರಾರಿಯಾಗಿದ್ದು, ಬೈಕಿನಲ್ಲಿ 8.640 ಲೀ ಮದ್ಯ ಸಿಕ್ಕಿದ್ದು, ಮದ್ಯ ಹಾಗೂ ವಾಹನವನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದಿಂದ ಗೋಡೆ ಗ್ರಾಮಕ್ಕೆ ಹೋಗುವ ರಸ್ತೆ ಮಾರ್ಗದ ಮದ್ಯ ರಸ್ತೆಗಾವಲು ಮಾಡುತ್ತಿರುವಾಗ ಪಲ್ಲಾಗಟ್ಟೆ ಗ್ರಾಮದಿಂದ ಹಿರೋ ಹೊಂಡಾ ಬೈಕ್‍ನಲ್ಲಿ ಪರವಾನಗಿ ಇಲ್ಲದೇ ಸಾಗಾಣಿಕೆ ಮಾಡುತ್ತಿದ್ದ 43.200 ಲೀ ಮದ್ಯ ಹಾಗೂ ಬೈಕ್‍ನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ಆರೋಪಿ ಎಂ.ಕೆ.ನಾಗರಾಜನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ