ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ನಕ್ಸಲ್ ನಿಗ್ರಹ ಕಾರ್ಯಾಚರಣೆ

ರಾಯ್‍ಪುರ, ಮೇ 4-ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳಿಂದ ನಕ್ಸಲ್ ನಿಗ್ರಹ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ. ಪೆÇಲೀಸರೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಮಾವೋವಾದಿ ನಾಯಕನೊಬ್ಬ ಬಲಿಯಾಗಿದ್ದಾನೆ. ಆತನ ತಲೆಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಸೋಯಂ ಕಮ ಪೆÇಲೀಸರ ಗುಂಡಿಗೆ ಬಲಿಯಾದ ನಕ್ಸಲ್ ನಾಯಕ. ಈ ಪ್ರದೇಶದಲ್ಲಿ ನಡೆದ ನಕ್ಸರ ದಾಳಿಯಲ್ಲಿ ಸೋಯಂ ಸಕ್ರಿಯವಾಗಿ ಭಾಗವಹಿಸಿದ್ದ. ಕೋಟಂ ಪ್ರದೇಶ ಸಮಿತಿ ಹೆಸರಿನ ನಕ್ಸಲ್ ಸಂಘಟನೆಯ ಮುಖ್ಯ ಸದಸ್ಯರಲ್ಲಿ ಒಬ್ಬನಾಗಿದ್ದ ಈತನ ತಲೆಗೆ ಪೆÇಲೀಸರು 5 ಲಕ್ಷ ರೂ. ಬಹುಮಾನ ಘೋಷಿಸಿದ್ದರು.

ಹತ ನಕ್ಸಲ್ ಮುಖಂಡನ ಬಳಿ ಇದ್ದ ಪಿಸ್ತೂಲು, ಸ್ಫೋಟಕಗಳು ಹಾಗೂ ಮತ್ತಿತ್ತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ