ಔರಾದ್ ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಸಿ

ಬೀದರ್, ಮೇ 5- ಹಿಂದುಳಿದ ಔರಾದ್ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರಭು ಚವ್ಹಾಣ್ ಮನವಿ ಮಾಡಿದರು.
ಎಕ್ಕಂಬಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಳೆದ ಎರಡು ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಾಡಿರುವೆ. ಇನ್ನೂ ಸಾಕಷ್ಟೂ ಕೆಲಸ ಮಾಡಬೇಕಾಗಿದೆ. ಹೀಗಾಗಿ ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ಕ್ಷೇತ್ರದ ಬಹಳಷ್ಟು ಜನರಿಗೆ ಗೊತ್ತಿಲ್ಲ. ಜೆಡಿಎಸ್ ನಮಗೆ ಲೆಕ್ಕಕ್ಕೆ ಇಲ್ಲ. ಕಾಂಗ್ರೆಸ್, ಜೆಡಿಎಸ್ ಈ ಬಾರಿ ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಮೇ 9ರಂದು ಬೀದರ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಆಗಮನದ ನಂತರ ಜಿಲ್ಲೆಯಲ್ಲಿ ಸುನಾಮಿ ಆಗಲಿದೆ ಎಂದು ಹೇಳಿದರು.

ಉದಗೀರ ಜಿಪಂ ಸದಸ್ಯ ಬಾಬುರಾವ ರಾಠೋಡ್, ಪಕ್ಷದ ಮುಖಂಡರಾದ ಸತೀಷ ಪಾಟೀಲ್, ಅನೀಲ್ ಬಿರಾದರ್, ವಸಂತ ಬಿರಾದರ್, ರಮೆಶ ದೇವಕತ್ತೆ, ಸಚೀನ್ ರಾಠೋಡ್, ನಾಗನಾಥ ಚಿಕ್ಲೆ, ಕಿರಣ ಪಾಟೀಲ್ ಇನ್ನಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ