ಸಿದ್ದರಾಮಯ್ಯನವರು ಮಗನನ್ನು ಕಳೆದುಕೊಂಡಿದ್ದರೂ ಎದೆಗುಂದದೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ : ಚಾಲೆಂಜಿಂಗ್ ಸ್ಟಾರ್ ದರ್ಶನ್

ಮೈಸೂರು, ಮೇ 5- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಗನನ್ನು ಕಳೆದುಕೊಂಡಿದ್ದರೂ ಎದೆಗುಂದದೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಮತ ನೀಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ರಮ್ಮನಹಳ್ಳಿಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದ ದರ್ಶನ್ ಈ ವೇಳೆ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 70 ವರ್ಷವಾಗಿದೆ. ಅವರು, ಪುತ್ರ ರಾಕೇಶ್‍ನನ್ನು ಕಳೆದುಕೊಂಡಿದ್ದಾರೆ. ಆದರೂ ಅವರು ಎದೆಗುಂದಲಿಲ್ಲ. ಯಶಸ್ವಿಯಾಗಿ ಆಡಳಿತ ನಡೆಸಿ ರಾಜ್ಯದಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಅರ್ಥಪೂರ್ಣ ಸೇವೆ ಸಲ್ಲಿಸಲು ನೀವೇಲ್ಲರೂ ಅವರಿಗೆ ಮತ ನೀಡಿ ಗೆಲ್ಲಿಸಬೇಕೆಂದರು.

ಈ ವೇಳೆ ವರುಣಾ ಕ್ಷೇತ್ರದ ಅಭ್ಯರ್ಥಿ ಡಾ.ಯತೀಂದ್ರ ಹಾಗೂ ಮೂಢಾ ಅಧ್ಯಕ್ಷ ಧೃವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ