ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನ

 

ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನ

ಬೀದರ. ಮೇ. ೦೬ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಯರನಳ್ಳಿ ಗ್ರಾಮಸ್ಥರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ಭವ್ಯವಾದ ಸ್ವಾಗತವನ್ನು ಕೋರಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸೂರ್ಯಕಾಂತ ನಾಗಮಾರಪಳ್ಳಿಯವರು ಗ್ರಾಮಸ್ಥರ ಈ ಪ್ರೀತಿ ಚುನಾವಣೆಯಲ್ಲಿ ಮತ ಹಾಕುವ ಮೂಲಕ ನನ್ನ ಗೆಲುವಿಗೆ ಸಹಕರಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪೀರಪ್ಪಾ ಔರಾದೆ ಯರನಳ್ಳಿ ಮಾತನಾಡಿ, ತನ್ನ ಸ್ವಾರ್ಥ ರಾಜಕೀಯಕ್ಕಾಗಿ ಇಂದಿನ ಕಾಂಗ್ರೇಸ್ ಸರ್ಕಾರ ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚಿ ಜನರಲ್ಲಿ ವೈಮನಸ್ಸು ಮೂಡಿಸುತ್ತಿದೆ.

ಇದಕ್ಕೆ ಜನರು ಆಸ್ಪದ ಕೊಡದೆ, ‘ಸರ್ವರಿಗು ಸಮಬಾಳು-ಸರ್ವರಿಗು ಸಮಪಾಲು’ ಎನ್ನುವ ತತ್ವ ಹೊಂದಿದ ಬಿ.ಜೆ.ಪಿ.ಗೆ ಎಲ್ಲರೂ ಮತ ಹಾಕಿ ಪಕ್ಷದ ಅಭ್ಯರ್ಥಿ ಶ್ರೀ ಸೂರ್ಯಕಾಂತ ನಾಗಮಾರಪಳ್ಳಿಯವರಿಗೆ ನಮ್ಮ ಗ್ರಾಮದಿಂದ ಅತ್ಯಧಿಕ ಮತಗಳು ನೀಡುವ ಮೂಲಕ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ತಾರಾಬಾಯಿ ಲಕ್ಷ್ಮಣ, ತಾಲೂಕಾ ಪಂಚಾಯತ ಸದಸ್ಯೆ ಸವಿತಾ ಧಮೇಂದ್ರ, ಗ್ರಾ.ಪಂ. ಅಧ್ಯಕ್ಷ ನೀಲಕಂಠ ದೇಶಮುಖ, ಎ.ಪಿ.ಎಮ್.ಸಿ. ಸದಸ್ಯ ಸುನಿತಾ ಜಗನ್ನಾಥ ಧಡ್ಡೆ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಜಯಕುಮಾರ ಕಾಂಗೆ, ವಿಜಯಕುಮಾರ ಪಾಟೀಲ್ ಗಾದಗಿ, ಯರನಳ್ಳಿ ಗ್ರಾಮದ ಪ್ರಮುಖರು, ಯುವಕರು, ಮಹಿಳೆಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ