ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ ಸೋಲಿನ ಭೀತಿಯಿಂದ ಕ್ಷೇತ್ರದ ಮತದಾರರಲ್ಲಿ ದಿನಕ್ಕೊಂದು ವದಂತಿ ಹರಡುತ್ತಿದ್ದಾರೆ : ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು

ಹನೂರು, ಮೇ 6- ಕ್ಷೇತ್ರದ ಬಿಎಸ್‍ಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಆರ್.ಮಂಜುನಾಥ್ ಸೋಲಿನ ಭೀತಿಯಿಂದ ಕ್ಷೇತ್ರದ ಮತದಾರರಲ್ಲಿ ದಿನಕ್ಕೊಂದು ವದಂತಿ ಹರಡುತ್ತಿದ್ದಾರೆ ಎಂದು ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಯ ಮಾತನ್ನು ಯಾರೂ ನಂಬಬಾರದು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ನಮ್ಮ ಸಮುದಾಯದ ಪರಮೋಚ್ಛ ನಾಯಕರಾಗಿದ್ದು, ನಾವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದೇವೆ. ಮುಂದೆಯೂ ಅವರನ್ನೇ ಬೆಂಬಲಿಸುತ್ತೇವೆ ಎಂದು ತಿಳಿಸಿದರು.

ಚಾಮರಾಜನಗರ ಹಾಲು ಒಕ್ಕೂಟ ಅಧ್ಯಕ್ಷ ಗುರುಮಲ್ಲಪ್ಪ, ಮುಖಂಡ ಶಾಗ್ಯ ರವಿ ಅವರು ಪಕ್ಷದ ಅಭ್ಯರ್ಥಿ ನರೇಂದ್ರ ಅವರ ಪರ ಪ್ರಚಾರ ಮಾಡಲಿದ್ದಾರೆ. ಇವರ ವಿರುದ್ಧ ಹರಡಿರುವ ವದಂತಿಗಳನ್ನು ನಂಬಬಾರದು ಎಂದು ಇದೇ ವೇಳೆ ಸ್ಪಷ್ಟಪಡಿಸಲಾಯಿತು.

ಶಾಸಕ ಆರ್.ನರೇಂದ್ರ ಮಾತನಾಡಿ, ನಾಳೆ ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಚುನಾವಣಾ ಬಹಿರಂಗ ಪ್ರಚಾರ ಸಭೆ ಏರ್ಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಮಹದೇವಪ್ಪ, ಗೀತಾ ಮಹದೇವಪ್ರಸಾದ್, ಮಾಜಿ ಸಚಿವರಾದ ಜಮೀರ್ ಅಹಮ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸದಸ್ಯ ರಮೇಶ್‍ನಾಯ್ಡು, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಮುಖಂಡ ಚನ್ನಮಲ್ಲೇಗೌಡ, ಚಿಕ್ಕ ತಮ್ಮಯ್ಯ, ವೆಂಕಟರಮಣನಾಯ್ಡು, ಜಯಪ್ರಕಾಶ್‍ಗುಪ್ತ, ಶಾಗ್ಯ ರವಿ ಇನ್ನಿತರರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ