ಮೈಸೂರಿನಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನೂರಾರು ಕಾರ್ಯಕರ್ತರು

ಮೈಸೂರು:ಮೇ-7: ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಇನ್ನೂ ಪಕ್ಷಾಂತರ ಪರ್ವ ಮುಂದುವರೆದಿದೆ.
ಮೈಸೂರಿನಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

ರಾಯಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕುಂದ ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿಗೆ ಆಗಮಿಸುತ್ತಿದ್ದಂತೆಯೇ ರಣತಂತ್ರ ರೂಪಿಸಿ ಜೆಡಿಎಸ್‌ ಕಾರ್ಯಕರ್ತರನ್ನು ಪಕ್ಷದತ್ತ ಸೆಳೆದುಕೊಳ್ಳುವಲ್ಲಿ ಶಸ್ವಿಯಾಗಿದ್ದಾರೆ.

ಮೈಸೂರಿನ ಖಾಸಗಿ ರೇಸಾರ್ಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ಯ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತರು ಪಕ್ಷ ಸೇರ್ಪಡೆಯಾಗಿದ್ದಾರೆ.

ಇನ್ನು ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ. ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಶಾರದದೇವಿ‌ ನಗರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ತೆರೆದ ವಾಹನದ ಮೂಲಕ ರೋಡ್ ಶೋ ನಡೆಸಿದ ಸಿಎಂ ಗೆ ಕಾರ್ಯಕರ್ತರು ಹೂ ಎರಚಿ ಸ್ವಾಗತ ಮಾಡಿದ್ದಾರೆ. .ಸಾವಿರಾರು ಕಾರ್ಯಕರ್ತರು ರೋಡ್ ಶೋ ನಲ್ಲಿ ಭಾಗಿಯಾಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ