ರಾಜ್ಯದಲ್ಲಿ ಇಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಒಟ್ಟು 13 ರಾಜ್ಯಗಳಲ್ಲಿ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ

ರಾಜ್ಯ ಸೇರಿದಂತೆ 13 ರಾಜ್ಯಗಳಲ್ಲಿ ಚಂಡಮಾರುತದ ಭೀತಿ: ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ
ನವದೆಹಲಿ:ಮೇ-7: ರಾಜ್ಯ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಇಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರೊಂದಿಗೆ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

ಇಂದು 13 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ. ಅದರಂತೆ ಹರ್ಯಾಣದಲ್ಲಿ ಸೋಮವಾರ ಹಾಗೂ ಮಂಗಳವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನು ರಾಜಧಾನಿ ದೆಹಲಿ ಸುತ್ತಮುತ್ತಲಿನ ಪ್ರದೇಶಗಳು, ಉತ್ತರಪ್ರದೇಶದ ಪಶ್ಚಿಮ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರ ರಾಜಸ್ಥಾನ, ಉತ್ತರ ಪ್ರದೇಶ ಐದು ರಾಜ್ಯಗಳಲ್ಲಿ ಗುಡುಗು ಮಿಂಚು ಸಹಿತ ಸುರಿದ ಭಾರೀ ಮಳೆಗೆ ಕನಿಷ್ಟ 124 ಮಂದಿ ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡ ಹಿನ್ನೆಲೆಯಲ್ಲಿ ಗೃಹ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಂ ಹಾಗೂ ತ್ರಿಪುರದಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ ಎನ್ನಲಾಗುತ್ತಿದ್ದು. ಉತ್ತರ ಪ್ರದೇಶದ ಪಶ್ಚಿಮ ಭಾಗಗಳು, ಬಿಹಾರ, ಪಶ್ಚಿಮ ಬಂಗಾಲ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ, ತ್ರಿಪುರ, ಕರ್ನಾಟಕ ಮತ್ತು ಕೇರಳ ರಾಜ್ಯಗಳ ಕೆಲವೆಡೆ ಸೋಮವಾರ ಹಾಗೂ ಮಂಗಳವಾರ ಬಿರುಗಾಳಿ ಸಹಿತ, ಗುಡುಗಿನಿಂದ ಕೂಡಿದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಲ್ಲದೆ ಸೋಮವಾರ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್, ಹರ್ಯಾಣ, ಚಂಡೀಘಡ, ದೆಹಲಿಯ ಕೆಲವೆಡೆ ಸೋಮವಾರ ಬಿರುಗಾಳಿ ಹಾಗೂ ಗುಡುಗು ಮಿಂಚು ಸಹಿತ ಮಳೆಯಾಗಲಿದೆ .

13 States,Storm Alert, For 2 Days,Union Home Ministry

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ