ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾgದಿಂದÀ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಕೆ

ಬೆಂಗಳೂರು, ಮೇ 7- ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದೆ.

ಏಪ್ರಿಲ್ ಹಾಗೂ ಮೇ ತಿಂಗಳ ಬಾಕಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ವಿಚಾರಣೆ ನಾಳೆ ಬರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‍ಗೆ ಅಫಿಡೆವಿಟ್ ಸಲ್ಲಿಸಿರುವ ಕರ್ನಾಟಕ ಸರ್ಕಾರ ಈ ವೇಳೆಗೆ 104 ಟಿಎಂಸಿ ನೀರು ಬಿಡಬೇಕಿತ್ತು.

ಈಗಾಗಲೇ 116 ಟಿಎಂಸಿ ನೀರು ಹರಿಸಿದ್ದೇವೆ. ಹೆಚ್ಚಿನ ಪ್ರಮಾಣದ ನೀರು ಹರಿದಿದೆ. ನಮ್ಮ ಜಲಾಶಯದಲ್ಲಿ 9 ಟಿಎಂಸಿ ನೀರು ಮಾತ್ರ ಬಾಕಿ ಇದೆ. ಮುಂದಿನ ಎರಡು ತಿಂಗಳು ಕಾಲ ನಗರ ಸೇರಿದಂತೆ ಇನ್ನಿತರೆ ಕಡೆ ನೀರಿನ ಅವಶ್ಯಕತೆ ಇದೆ. ನಾವು ನೀರು ಹರಿಸಲು ಸಾಧ್ಯವಿಲ್ಲ ಎಂಬುದು ಕರ್ನಾಟಕ ಸರ್ಕಾರ ವಕೀಲರ ವಾದವಾಗಿದೆ.

ಈ ಬಾರಿ ನಾವೇ ಸಂಕಷ್ಟದಲ್ಲಿದ್ದೇವೆ. ಸಂಕಷ್ಟದ ಸಂದರ್ಭದಲ್ಲಿ ಸಂಕಷ್ಟದ ಸೂತ್ರವನ್ನು ಪಾಲಿಸಬೇಕಾಗಿದೆ ಎಂದು ಪ್ರಮಾಣ ಪತ್ರದಲ್ಲಿ ಸರ್ಕಾರ ಉಲ್ಲೇಖಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ