ಔರಾದ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ವಿವಿಧೆಡೆ ಮತಯಾಚನೆ ಕೋಮುವಾದಿ ಬಿಜೆಪಿಗೆ ಪಾಠ ಕಲಿಸಿ

ಔರಾದ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ವಿವಿಧೆಡೆ ಮತಯಾಚನೆ
ಕೋಮುವಾದಿ ಬಿಜೆಪಿಗೆ ಪಾಠ ಕಲಿಸಿ
ಬೀದರ್, ಮೇ 8
ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‍ಗೆ ಬರುತ್ತಿದ್ದು, ಇದು ಗೆಲುವಿನ ಸೂಚನೆಯಾಗಿದೆ.

ಹಣ, ಹೆಂಡ ಕೊಟ್ಟು ಶಾಸಕರಾದವರಿಗೆ ಈ ಬಾರಿ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬುದ್ಧಿ ಕಲಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಹೇಳಿದರು.

ಮೀಸಲು ಕ್ಷೇತ್ರ ಔರಾದ್‍ನ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ದೀನ ದಲಿತರು, ಅಲ್ಪಸಂಖ್ಯಾತರಿಗೆ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ-ಮನೆಗೂ ತಲುಪಿಸಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಹಿಂದ ವರ್ಗದ ಅಭಿವೃದ್ಧಿಗಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಎಸ್‍ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲು ಮುಂದಾಗಿರುವ ಕೋಮುವಾದಿ ಬಿಜೆಪಿಗೆ ಅಧಿಕಾರ ನೀಡಬೇಡಿ. ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ. ಡಾ. ಅಂಬೇಡ್ಕರ್ ಅವರು ಸಾಕಷ್ಟು ಹೋರಾಟ ನಡೆಸಿ ಮತದಾನ ಹಕ್ಕನ್ನು ತಂದಿದ್ದು, ನಮ್ಮ ವೋಟ್ ಮಾರಿಕೊಳ್ಳಬಾರದು. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಕಾಂಗ್ರೆಸ್‍ಗೆ ಮತ ನೀಡಿ ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಸೇರಿದಂತೆ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ