ಸೂರ್ಯಕಾಂತ ನಾಗಮಾರಪಳ್ಳಿಗೆ ಬೆಂಬಲಿಸಲು ಮಾಲೀಕಯ್ಯ ಗುತ್ತೆದಾರ ಮನವಿ

ಬೀದರ. ಮೇ. 08. ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಅವರನ್ನು ಬೆಂಬಲಿಸಬೇಕು ಎಂದು ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೆದಾರ ಮನವಿ ಮಾಡಿದರು.
ನಗರದಲ್ಲಿ ಈಡಿಗ ಸಮಾಜದ ಮುಖಂಡರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಸೂರ್ಯಕಾಂತ ಜನಪರ ಕಾಳಜಿ ಹೊಂದಿದ್ದಾರೆ. ದಶಕದಿಂದ ಜನಸೇವೆಯಲ್ಲಿ ತೊಡಗಿಸಿದ್ದಾರೆ. ಆದ್ದರಿಂದ ಕ್ಷೇತ್ರದ ಈಡಿಗ ಸಮಾಜ ಬಾಂಧವರು ಬಿಜೆಪಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರ ಕಲ್ಯಾಣಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದಾರೆ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಜನೋಪಯೋಗಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲೆಡೆ ಬಿಜೆಪಿ ಪರವಾದ ವಾತಾವರಣ ಕಂಡು ಬರುತ್ತಿದೆ ಎಂದು ಹೇಳಿದರು.

ಹೈದರಾಬಾದ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳ ಉಸ್ತುವಾರಿಯನ್ನು ನನಗೆ ಕೊಡಲಾಗಿದೆ. ಈ ಭಾಗದ 24 ಕ್ಷೇತ್ರಗಳಲ್ಲಿ ಸುಮಾರು 15 ರಿಂದ 20 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಮತದಾರರು ಆಶೀರ್ವದಿಸಬೇಕು ಎಂದು ಕೋರಿದರು.

ಬಿಜೆಪಿ ಮುಂಡರಾದ ಬಾಬುವಾಲಿ, ಜಯಕುಮಾರ ಕಾಂಗೆ, ಡಾ. ರಾಜಶೇಖರ ಸೇಡಂಕರ, ಈಡಿಗ ಸಮಾಜದ ದಿಲೀಪ ಗುತ್ತೆದಾರ, ಸತೀಶ ಗುತ್ತೆದಾರ, ವಿಷ್ಣು ಗುತ್ತೆದಾರ ಮುಂತಾದವರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ