ರಾಜರಾಜೇಶ್ವರಿ ನಗರದ ಖಾಸಗಿ ಫ್ಲಾಟ್‍ನಲ್ಲಿ ಮತದಾರರ ಗುರುತಿನ ಚೀಟಿ ಪತ್ತೆ ಹಿನ್ನಲೆ; ಚುನಾವಣೆಯನ್ನು ರದ್ದು ಪಡಿಸಿ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಒತ್ತಾಯ

ಬೆಂಗಳೂರು,ಮೇ 9-ರಾಜರಾಜೇಶ್ವರಿ ನಗರದ ಖಾಸಗಿ ಫ್ಲಾಟ್‍ನಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ತಕ್ಷಣವೇ ಚುನಾವಣೆಯನ್ನು ರದ್ದು ಪಡಿಸಿ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಒತ್ತಾಯಿಸಿದೆ.

ಈ ಸಂಬಂಧ ಇಂದು ತುರ್ತು ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಬಿಜೆಪಿ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಡಿ.ವಿ.ಸದಾನಂದಗೌಡ ಅವರುಗಳು, ಈ ಪ್ರಕರಣವು ಅತ್ಯಂತ ಗಂಭೀರವಾಗಿರುವುದರಿಂದ ಆಯೋಗ ತಕ್ಷಣವೇ ಚುನಾವಣೆಯನ್ನು ಮುಂದೂಡಬೇಕೆಂದು ಆಗ್ರಹಿಸಿದರು.

10 ಸಾವಿರಕ್ಕೂ ಅಧಿಕ ಗುರುತಿನ ಚೀಟಿ ಪತ್ತೆಯಾಗಿರುವುದು ಸಾಮಾನ್ಯ ಪ್ರಕರಣವಲ್ಲ. ಇನ್ನು ಹೊರಬಾರದಿರುವ ಪ್ರಕರಣಗಳು ಸಾಕಷ್ಟಿವೆ. ಕಾಂಗ್ರೆಸ್ ಸೋಲುವ ಹತಾಶೆಯಿಂದ ಇಂತಹ ನೀಚ ಕೃತ್ಯಕ್ಕೆ ಇಳಿದಿದೆ ಎಂದು ವಾಗ್ದಾಳಿ ನಡೆಸಿದರು.

ಮಂಜುಳಾ ಈ ಪ್ರಕರಣದಲ್ಲಿ ಶಾಮೀಲಾಗಿದ್ದರೆ ಪೆÇಲೀಸರು ಈವರೆಗೂ ಏಕೆ ಬಂಧಿಸಿಲ್ಲ. ನಮ್ಮ ಕಾರ್ಯಕರ್ತರು ದೂರು ನೀಡಿ ಹಲವು ಗಂಟೆ ಆದ ಬಳಿಕ ಫ್ಲಾಟ್‍ಗೆ ಪೆÇಲೀಸರು ಬಂದಿದ್ದಾರೆ. ಆ ವೇಳೆಗಾಗಲೇ ನಮ್ಮ ಪಕ್ಷದ ಕಾರ್ಯಕರ್ತರೇ ಒಳನುಗ್ಗಿ ಗುರುತಿನ ಚೀಟಿಗಳನ್ನು ವಶಪಡಿಸಿಕೊಂಡಿದ್ದರು. ಪೆÇಲೀಸರ ವಿಳಂಬ ಹಲವು ಸಂಶಯಗಳಿವೆ ಎಡೆ ಮಾಡಿಕೊಟ್ಟಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ರಾಕೇಶ್ ಈ ಪ್ರಕರಣದ ರೂವಾರಿ ಎಂದು ಆರೋಪ ಮಾಡುತ್ತಿದ್ದಾರೆ. ವಾಸ್ತವವಾಗಿ ಇದನ್ನು ಹೊರ ತೆಗೆದಿದ್ದೆ ಅವರು. ಈಗ ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಕಟ್ಟುಕಥೆಯನ್ನು ಕಟ್ಟುತ್ತಿದ್ದಾರೆ.ಪೆÇಲೀಸರು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಆಗಲಿ ಕಾನೂನಿನ ಪ್ರಕಾರ ಶಿಕ್ಷೆ ನೀಡಲು ನಮ್ಮ ಅಭ್ಯಂತರವೇನಿಲ್ಲ ಎಂದು ಜಾವ್ಡೇಕರ್ ಸ್ಪಷ್ಟಪಡಿಸಿದರು.

ಮತದಾರರ ಗುರುತಿನ ಚೀಟಿ ತಯಾರಿಸಲು ಅತ್ಯಾಧುನಿಕ ಯಂತ್ರಗಳನ್ನು ಬಳಸಲಾಗಿದೆ. ಕಂಪ್ಯೂಟರ್, ಪ್ರಿಂಟರ್, ಲ್ಯಾಪ್‍ಟಾಪ್, ಹ್ಯಾಲೊ ಯಂತ್ರ ಸೇರಿದಂತೆ ಮತ್ತಿತರ ವಸ್ತುಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಅಸಲಿಗೆ ಸಿಕ್ಕಿರುವುದು 10 ಸಾವಿರ ಗುರುತಿನ ಚೀಟಿ ಮಾತ್ರ. ಈ ರೀತಿ ಒಂದು ಲಕ್ಷ ಚೀಟಿಗಳನ್ನು ಸೃಷ್ಟಿ ಮಾಡಿರುವ ಸಂಭವವಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಒಂದು ತಿಂಗಳ ಹಿಂದೆಯೇ ನಮ್ಮ ಪಕ್ಷದ ಕಾರ್ಯಕರ್ತರು ಇಲ್ಲಿನ ಶಾಸಕರ ಹಿನ್ನೆಲೆಯನ್ನು ತಿಳಿದೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಂದು ಎಚ್ಚೆತ್ತುಕೊಂಡಿದ್ದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದರು.

ಬಿಜೆಪಿ ಯಾವಾಗಲೂ ಪ್ರಜಾತಂತ್ರ ವ್ಯವಸ್ಥೆಯಲ್ಲೇ ಚುನಾವಣೆ ನಡೆಸಬೇಕೆಂಬ ಸಿದ್ಧಾಂತವನ್ನು ಇಟ್ಟುಕೊಂಡಿದೆ. ಆದರೆ ನಮ್ಮ ಎದುರಾಳಿ ಕಾಂಗ್ರೆಸ್ ನಾಯಕರು ಹೇಗಾದರೂ ಸರಿಯೇ ಚುನಾವಣೆ ಗೆಲ್ಲಬೇಕೆಂಬ ತೀರ್ಮಾನಕ್ಕೆ ಬಂದು ಅಡ್ಡದಾರಿ ಹಿಡಿಯುತ್ತಿದ್ದಾರೆ. ಆಯೋಗ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಆರ್.ಅಶೋಕ್, ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ