ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿ ಖಾರದಪುಡಿ ಎರಚಿ ಹಲ್ಲೆ:

ಮೈಸೂರು, ಮೇ 10-ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕ ಹಾಗೂ ಅಭ್ಯರ್ಥಿ ಮೇಲೆ ಖಾರದಪುಡಿ ಎರಚಿ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಆರ್.ನಗರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಹಲ್ಲೆಗೊಳಗಾಗಿದ್ದು , ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ತಡರಾತ್ರಿ ಕೆ.ಆರ್.ನಗರದ ಹೊಸ ಅಗ್ರಹಾರದ ಬಳಿ ವೆಂಕಟೇಶ್ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಡ್ರಾಪ್ ಕೇಳುವ ನೆಪದಲ್ಲಿ ಕಾರನ್ನು ತಡೆದ ದುಷ್ಕರ್ಮಿಗಳು ವೆಂಕಟೇಶ್ ಹಾಗೂ ಕಾರು ಚಾಲಕನಿಗೆ ಖಾರದ ಪುಡಿ ಎರಚಿ ವೆಂಕಟೇಶ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.  ತಕ್ಷಣ ವೆಂಕಟೇಶ್ ಅವರಿಗೆ ಕೆ.ಆರ್.ನಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೆ.ಆರ್.ನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ