ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ದ್ರಾವಿಡ ಹಿಂದೂ ಮಹಾಸಭಾ ಮನವಿ

ಬೆಂಗಳೂರು, ಮೇ 10-ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಮತದಾರರು ಬೆಂಬಲಿಸಬೇಕೆಂದು ದ್ರಾವಿಡ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಶ್ರೀನಿವಾಸ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಶಸ್ವಿ ಅಡಳಿತ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 159 ಭರವಸೆಗಳನ್ನು ಈಡೇರಿಸಿದ್ದಾರೆ ಎಂದರು.
ಈ ಬಾರಿಯು ಕಾಂಗ್ರೆಸ್‍ಗೆ ಅಧಿಕಾರ ನೀಡಿದರೆ ಇನ್ನೂ ಹೆಚ್ಚು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಬಿಜೆಪಿ ಅಧಿಕಾರದ ಅವಧಿಯಲ್ಲಿ ಅನೇಕ ಭ್ರಷ್ಟಾಚಾರಗಳು ನಡೆದಿದ್ದು, ಬಳ್ಳಾರಿಯಲ್ಲಿ ಕೋಟ್ಯಂತರ ರೂ.ಗಳ ಹಗರಣ ನಡೆದಿದೆ. ಎಸ್‍ಸಿ-ಎಸ್ಟಿ ಕಾಯ್ದೆಯನ್ನು ದುರ್ಬಲಗೊಳಿಸುವುದಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ದಲಿತರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ. ದೇಶದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ಅಂಬೇಡ್ಕರ್ ಅವರ ತತ್ವಸಿದ್ಧಾಂತಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ ಎಂದು ತಿಳಿಸಿದರು.
ಬರೀ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಏರಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣವನ್ನು ವಾಪಸ್ ತರುವಲ್ಲಿ ವಿಫಲವಾಗಿದ್ದಾರೆ. ನಿರುದ್ಯೋಗಿಗಳಿಗೆ ಉದ್ಯೋಗ ನೀಡುವಲ್ಲಿ ವಿಫಲರಾಗಿದ್ದಾರೆ. ಇಂತಹ ಸರ್ಕಾರವನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ