ಔರಾದ್‍ನಲ್ಲಿ ಪ್ರಭು ಚವ್ಹಾಣ್ ಮನೆ, ಮನೆಗೆ ತೆರಳಿ ಮತಯಾಚನೆ ಮೋದಿ ಸುನಾಮಿಗೆ ಕಾಂಗ್ರೆಸ್ ಧೂಳಿಪಟ

 

ಬೀದರ್, ಮೇ 10-ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಔರಾದ್ ಬಿಜೆಪಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಭರ್ಜರಿ ಪ್ರಚಾರ ನಡೆಸಿದರು. ವಿವಿಧೆಡೆ ಪಾದಯಾತ್ರೆ ಮೂಲಕ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಪ್ರಭು ಚವ್ಹಾಣ್, ಪ್ರಧಾನಿ ನರೇಂದ್ರ ಮೋದಿ ಬೀದರ್ ಭೇಟಿ ನೀಡಿದ ನಂತರದ ಔರಾದ್‍ನಲ್ಲಿ ಸಂಪೂರ್ಣ ವಾತಾವರಣ ಸಂಪೂರ್ಣ ಬದಲಾವಣೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದರು.
ಮೋದಿ ಸುನಾಮಿಯಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ. ಈ ಬಾರಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ. ರಾಜ್ಯದಲ್ಲಿಯೇ ಅತ್ಯಧಿಕ ಅಂತರಗಳ ಮತದಿಂದ ಗೆಲ್ಲುವೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಮತ್ತೇ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.

ಔರಾದ್ ಕ್ಷೇತ್ರದ ಎಲ್ಲೆಡೆ ಅಭೂತಪೂರ್ವ ಬೆಂಬಲ ಸಿಗುತ್ತಿದ್ದು, ಎಲ್ಲ ಸಮಾಜದವರು ಬೆಂಬಲಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನನಗೆ ವಿಜನ್ ಹೊಂದಿದ್ದೇನೆ. ಎಲ್ಲ ಸಮಾಜ ಬಾಂಧವರ ಬೆಂಬಲ ನನಗಿದೆ ಎಂದರು.

ಪಕ್ಷದ ಎಲ್ಲ ಮುಖಂಡರ, ಪದಾಧಿಕಾರಿಗಳ ಸಹಭಾಗಿತ್ವ ದೊಂದಿಗೆ ಪ್ರಚಾರ ನಡೆಯುತ್ತಿದೆ. ಯಾರೂ ಅತೃಪ್ತರಿಲ್ಲ, ಎಲ್ಲರೂ ಪ್ರಚಾರದಲ್ಲಿ ಸಕ್ರಿಯ ಭಾಗವಹಿಸಿದ್ದಾರೆ. ಸೂಕ್ತ ಮಾರ್ಗದರ್ಶನ ಮಾಡುತ್ತಿದ್ದಾರೆ. ಬಿಜೆಪಿ ಗೆಲ್ಲಲೇಬೇಕು. ಬಿಎಸ್‍ವೈ ಸಿಎಂ ಆಗಬೇಕು, ಮೋದಿ ಕೈಬಲಗೊಳ್ಳಬೇಕೆಂಬ ಏಕೈಕ ಧ್ಯೇಯ ಎಲ್ಲರದ್ದಾಗಿದೆ. ಹೀಗಾಗಿ ಈ ಬಾರಿ ಬಿಜೆಪಿ ಗೆಲುವು ಖಚಿತ ಎದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ