ಗುರುತಿನ ಚೀಟಿ ಸಂಗ್ರಹದ ಪ್ರಕರಣ: ಮುಂದುವರೆದ ತನಿಖೆ

 

ಬೆಂಗಳೂರು,ಮೇ11- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೆÇಲೀಸರು ತನಿಖೆ ಕೈಗೊಂಡಿದ್ದು , ಎಫ್‍ಐಆರ್ ದಾಖಲಾಗಿರುವುದಕ್ಕೂ ಆರೋಪ ಸಾಬೀತಾಗುವುದಕ್ಕೂ ವ್ಯತ್ಯಾಸವಿದೆ. ಈ ಹಂತದಲ್ಲಿ ನಾವು ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಆರ್.ಆರ್.ನಗರದ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವೇ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ