ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ನೀಡಿದ್ದೇನೆ – ಜಿ.ಟಿ.ದೇವೇಗೌಡ

ಮೈಸೂರು, ಮೇ 12- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ದೂರು ನೀಡಿದ್ದೇನೆ ಎಂದು ಚಾಮುಂಡೇಶ್ವರಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿನ ಬೂತ್‍ನಲ್ಲಿ ಮತಚಲಾಯಿಸಿ ಮಾತನಾಡಿದ ಅವರು, ಉನ್ನತ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ನೀತಿ ಸಂಹಿತೆ ಬಗ್ಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮನೆ ಮನೆಗೆ ತೆರಳಿ ಪ್ರಚಾರ ನಡೆಸುವಾಗ ಕೇವಲ 10 ಮಂದಿ ಮಾತ್ರ ಜತೆಯಲ್ಲಿರುವಂತೆ ಕಟ್ಟುನಿಟ್ಟಿನ ಆದೇಶವಿದ್ದರೂ ಸಿದ್ದರಾಮಯ್ಯ ಅವರು ತಮ್ಮೊಂದಿಗೆ 100ರಿಂದ 200 ಮಂದಿಯನ್ನು ಕರೆದುಕೊಂಡು ಹೋಗಿ ಪ್ರಚಾರ ಮಾಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿರುವ ಅವರ ವಿರುದ್ಧ ದೂರು ನೀಡಿದ್ದೇನೆ ಎಂದರು.
ಇಂದು ಬೂತ್‍ನಲ್ಲಿ ಮೊದಲ ಮತವನ್ನು ತಮ್ಮ ಪತ್ನಿ ಲಲಿತಾ ಚಲಾಯಿಸಿದರು. ನಾನು ಎರಡನೇ ಮತ ಚಲಾಯಿಸಿದೆ. ನನ್ನ ಪುತ್ರಿ ಯಶೋಧಾ ಮೂರನೆ ಮತ ಚಲಾಯಿಸಿದ್ದಾರೆ ಎಂದು ನುಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ