ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ – ಎಚ್.ಡಿ.ದೇವೇಗೌಡ

ಹಾಸನ, ಮೇ 12-ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್-ಬಿಜೆಪಿ ಹಣದ ಹೊಳೆಯನ್ನೇ ಹರಿಸಿವೆ. ಆದರೂ ಕುಮಾರಸ್ವಾಮಿ ಪರ ಜನರ ಬಲವಿದೆ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.
ಹಾಸನದ ಹೊಳೆನರಸೀಪುರ ತಾಲೂಕಿನ ಪಡುವಲ ಹಿಪ್ಪೆ ಗ್ರಾಮದಲ್ಲಿ ಇಂದು ಬೆಳಿಗ್ಗೆ 8.45ರಲ್ಲಿ ಮತ ಚಲಾಯಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಚುನಾವಣೆಯಲ್ಲಿ ಜೆಡಿಎಸ್ ಜಯಗಳಿಸಲಿದೆ. ರಾಷ್ಟ್ರೀಯ ಪಕ್ಷಗಳ ದುಡ್ಡಿನ ವ್ಯವಹಾರದಿಂದ ಕೆಲವು ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ ಎಂದರು.
ತಾವು ರಾಜಕೀಯ ಜೀವನಕ್ಕೆ ಕಾಲಿಟ್ಟಾಗಿನಿಂದಲೂ ಪಡುವಲ ಹಿಪ್ಪೆಯಲ್ಲೇ ಮತ ಚಲಾಯಿಸುತ್ತಿದ್ದೇವೆ ಹಾಗೂ ಜಯಗಳಿಸುತ್ತಿದ್ದೇವೆ. ಈ ಬಾರಿಯೂ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇವೇಗೌಡರೊಂದಿಗೆ ಅವರ ಪತ್ನಿ ಚೆನ್ನಮ್ಮ ಸಹ ಮತ ಚಲಾಯಿಸಿದರು. ಇದೇ ವೇಳೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ಪಡುವಲ ಹಿಪ್ಪೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ