ಆಸ್ತಿ ಕಲಹದಿಂದ ಬೇಸತ್ತಿದ್ದ ವೃದ್ಧೆ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ!

ಹಾವೇರಿ,ಮೇ12-ಆಸ್ತಿ ಕಲಹದಿಂದ ಬೇಸತ್ತಿದ್ದ ವೃದ್ಧೆಯೊಬ್ಬರ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮತಗಟ್ಟೆ ಎದುರೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ದೇವಗಿರಿ ಮತಗಟ್ಟೆಯಲ್ಲಿ ನಡೆದಿದೆ. ಪಾರ್ವತಮ್ಮ(60) ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ.
ಕೌಟುಂಬಿಕ ಕಲಹ ಮತ್ತು ಆಸ್ತಿ ಕಲಹದಿಂದ ಬೇಸತ್ತಿದ್ದ ಪಾರ್ವತಮ್ಮ ಅವರು ಮತಗಟ್ಟೆ ಎದುರೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅಧಿಕಾರಿಗಳು ಮತ್ತು ಸ್ಥಳೀಯರು ಅಜ್ಜಿಯನ್ನು ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ