ಮಗ ನಿಖಿಲ್ ಜೊತೆ ಸಿಂಗಾಪುರಕ್ಕೆ ತೆರಳಿದ ಹೆಚ್‍ಡಿ ಕುಮಾರಸ್ವಾಮಿ!

ಬೆಂಗಳೂರು,ಮೇ 13

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ.

ಮಗ ನಿಖಿಲ್ ಜೊತೆ ಕುಮಾರಸ್ವಾಮಿ ಅವರು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ರಾಜ್ಯ ಚುನಾವಣೆಯ ಹಿನ್ನೆಲೆಯಲ್ಲಿ ಹೆಚ್ ಡಿಕೆ ಅವರು ಅವಿರತವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಹಗಲು, ರಾತ್ರಿ ಎನ್ನದೇ ದಣಿವರಿಯದಂತೆ ಓಡಾಡಿದ್ದರು. ಹೀಗಾಗಿ ಪ್ರಚಾರದ ಕೊನೆ ದಿನಗಳಲ್ಲಿ ಸುಸ್ತಾಗಿದ್ರು. ಹೀಗಾಗಿ ತನ್ನ ಮಗನ ಜೊತೆ ಚಿಕಿತ್ಸೆಗೆಂದು ಸಿಂಗಾಪುರಕ್ಕೆ ತೆರಳಿದ್ದಾರೆ.

ಅಪ್ಪ- ಮಗ ನಾಳೆ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ