ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ:

ಯಾದಗಿರಿ, ಮೇ 13- ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸುರಪುರ ತಾಲ್ಲೂಕಿನ ಅಗರ್ತಿ ಗ್ರಾಮದಲ್ಲಿ ನಡೆದಿದೆ.
ಬೈಕ್‍ನಲ್ಲಿ ಹೋಗುತ್ತಿದ್ದ ನಂದಪ್ಪ ದೊಡ್ಡಮನಿ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ತಡರಾತ್ರಿ ಈ ಘಟನೆ ನಡೆದಿದ್ದು , ಘಟನೆಯಿಂದಾಗಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಬೈಕ್‍ನಲ್ಲಿ ಬರುವಾಗ ಸುಮಾರು 10 ಮಂದಿ ಇವರನ್ನು ಅಡ್ಡಗಟ್ಟಿದ್ದಾರೆ. ಹಣ ಕೊಡುವಂತೆ ಬೆದರಿಸಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ಜಗಳ ತೆಗೆದು ಹತ್ಯೆ ಮಾಡಿರಬಹುದೆಂದು ಶಂಕೆ ವ್ಯಕ್ತವಾಗಿದೆ.
ಕೆಂಬಾವಿ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ