ನನ್ನನ್ನು ಸೋಲಿಸಲು ವಾಮಮಾರ್ಗ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಮೇ 13- ನನ್ನನ್ನು ಸೋಲಿಸಲು ವಾಮಮಾರ್ಗ ಅನುಸರಿಸಲಾಗಿದ್ದು, ಉದ್ದೇಶಪೂರ್ವಕವಾಗಿಯೇ ಮತದಾರರ ಹೆಸರನ್ನು ಬೇರೆ ಕ್ಷೇತ್ರಕ್ಕೆ ಬದಲಾಯಿಸಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಸಾವಿರಾರು ಮತದಾರರ ಹೆಸರನ್ನು ತೆಗೆದುಹಾಕಲಾಗಿದೆ. ಹಾಗಾಗಿ ನನ್ನ ಕ್ಷೇತ್ರದ ಹಲವರು ಮತದಾನದಿಂದ ವಂಚಿತರಾಗಿದ್ದಾರೆ ಹಾಗೂ ಮತದಾನ ಪ್ರಮಾಣ ಕಡಿಮೆಯಾಗಿದೆ. ಏನೇ ಆದರೂ ಗೆಲುವು ನನ್ನದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನ ಕ್ಷೇತ್ರದಲ್ಲಿ ಗೋಲ್‍ಮಾಲ್ ನಡೆದಿದೆ. ಹಲವು ಕಡೆ ಇವಿಎಂ ಯಂತ್ರ ಅದಲು ಬದಲು ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ