ಅಪೆ ಆಟೋಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರ ಮೃತ

ಮಂಡ್ಯ ಮೇ 14 – ಅಪೆ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಕುಳಿತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಅರಕೆರೆ ಪೆÇಲೀಸ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಕೋಡಿಯಾಲ ಗ್ರಾಮದ ಯುವಕ ಮೃತಪಟ್ಟಿದ್ದಾನೆ.
ನಿನ್ನೆ ಸಂಜೆ ಒಂದೇ ಬೈಕ್‍ನಲ್ಲಿ ಮೂವರು ಸ್ನೇಹಿತರು ಹೋಗುತ್ತಿದ್ದರು ಅರೆಕೆರೆ ಸಮೀಪ ವೇಗವಾಗಿ ಹೋಗುತ್ತ್ತಿದ್ದ ಬೈಕ್ ಎದುರಿನಿಂದ ಬರುತ್ತಿದ್ದ ಅಪೆ ಆಟೋಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಮೃತ ಯುವಕನ ಹೆಸರು ತಿಳಿದು ಬಂದಿಲ್ಲ ಗಾಯಗೊಂಡ ಇಬ್ಬರು ಯುವಕರ ಸ್ಥಿತಿಯೂ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರಗೆ ದಾಖಲಿಸಲಾಗಿದೆ.
ಅರೆಕೆರೆ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ