ಕುಡಿಯುವ ನೀರಿನ ಸಮಸ್ಯೆ: ಗ್ರಾಮಸ್ಥರ ಪ್ರತಿಭಟನೆ

ರಾಯಚೂರು, ಮೇ 14- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಇಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಜಡಿದ ಘಟನೆ ಇಂದು ಬೆಳಗ್ಗೆ ಇಂದು ನಡೆದಿದೆ.
ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನ ಅತ್ತನೂರು ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾರೂ ಪ್ರಯತ್ನಿಸಲಿಲ್ಲ. ಇದರಿಂದ ರೋಸಿ ಹೋದ ಸ್ಥಳೀಯರು ಇಂದು ಪ್ರತಿಭಟನೆ ನಡೆಸಿ ಕೊನೆಗೆ ಕಚೇರಿಗೆ ಬೀಗ ಜಡಿದಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಚುನಾವಣೆ ಸಂದರ್ಭದಲ್ಲಿ ಬಂದ ಕೆಲವು ಅಭ್ಯರ್ಥಿಗಳು ಆಶ್ವಾಸನೆ ನೀಡಿ ಹೋಗಿದ್ದಾರೆ. ಆದರೆ ಅವರು ಕಾಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೆÇಲೀಸರು ಗ್ರಾಮಸ್ಥರ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ವಿಷಯ ತಿಳಿದು ಯಾವೊಬ್ಬ ಸಿಬ್ಬಂದಿ ಕೂಡ ಗ್ರಾಪಂ ಕಚೇರಿಗೆ ಆಗಮಿಸಲಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ