ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ: ಕಲ್ಲಿನಿಂದ ತಲೆಗೆ ಒಡೆದು ಹತ್ಯೆ

ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ ಮೂಲದ ಮಧು (35) ಕೊಲೆಯಾದ ಯುವಕ.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಮಧುವನ್ನು ಮನಬಂದಂತೆ ಥಳಿಸಿ ಬಿಯರ್ ಬಾಟಲಿಯಿಂದ ತಲೆಗೆ ಒಡೆದು, ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಣಕಾಸು ವಿಚಾರ ಅಥವಾ ಹಳೇ ವೈಷಮ್ಯದಿಂದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದೆಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಹಾಸನ ನಗರ ಠಾಣೆ ಪೆÇಲೀಸರು ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ