ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಭರ್ಜರಿ ಜಯ:

ತೀರ್ಥಹಳ್ಳಿ, ಮೇ 15-ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್‍ನ ಕಿಮ್ಮನೆರತ್ನಾಕರ್ ವಿರುದ್ಧ 20 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯ ಗಳಿಸಿದ್ದಾರೆ.
ಹ್ಯಾಟ್ರಿಕ್ ಸೋಲಿನಿಂದ ಕಂಗಾಲಾಗಿದ್ದ ಅವರು, ಅದರಿಂದ ಪಾರಾಗಲು ಹೋರಾಟ ನಡೆಸುತ್ತಿದ್ದರು. ಈ ಕ್ಷೇತ್ರದ ಈ ಬಾರಿ ಅವರನ್ನು ಕೈ ಹಿಡಿದಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಮಂಜುನಾಥ್‍ಗೌಡ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‍ಗೆ ಸೇರಿದ್ದರು. ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರು ಜೆಡಿಎಸ್‍ನಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದರು. ಈಗ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದೆ. ಶಿಕ್ಷಣ ಸಚಿವರೂ ಆಗಿದ್ದ ಕಿಮ್ಮನೆ ರತ್ನಾಕರ್ ಅವರಿಗೆ ಕ್ಷೇತ್ರದಲ್ಲಿ ತೀವ್ರ ಮುಖಭಂಗವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ